ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ.


ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮವನ್ನು ನೇರವಾಗಿ ವಿಕ್ಷೀಸಲು ಇಲ್ಲಿ ಕ್ಲಿಕ್  ಮಾಡಿ.
Radio ಮೂಲಕ Mobile ನಲ್ಲೆಯೇ ಕೇಳಿಸಲು  ಇಲ್ಲಿ ಕ್ಲಿಕ್  ಮಾಡಿ.

Youtube ಮುಖಾಂತರ  ವೀಕ್ಷಿಸಲು ಇಲ್ಲಿ ಕ್ಲಿಕ್   ಮಾಡಿ.

ಸಮಯ :11-00 ಗಂಟೆ.ಬೆಳಿಗ್ಗೆ.
ದಿನಾಂಕ :27-01-2023 ರ ಶುಕ್ರವಾರ.


 ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದ ಸಂಪೂರ್ಣ ವಿವರಗಳಿಗಾಗಿ ಈ ಕೆಳಗಿನ PDF ನೋಡಿ.

ರಸ ಪ್ರಶ್ನೆ



        





ಪ್ರೌಢ ಹಾಗೂ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗಾಗಿ “ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ಕಾರ್ಯಕ್ರಮದಡಿ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರಸಪ್ರಶ್ನೆ (Qult Competition) ಸ್ಪರ್ಧೆಯನ್ನು ಆಯೋಜಿಸಲು ಅನುಮೋದನೆಯಾಗಿರುತ್ತದೆ. ವಿದ್ಯಾರ್ಥಿಗಳಿಗೆ ಈ ಸ್ಪರ್ಧೆಯನ್ನು ಆಯೋಜಿಸುವ ಮೂಲಕ ಅವರಲ್ಲಿ ಗಣಿತ, ವಿಜ್ಞಾನ, ತಂತ್ರಜ್ಞಾನ, ಸಾಮಾನ್ಯ ಜ್ಞಾನ, ಭಾಷೆ, ಭಾರತ ದೇಶದ ಪರಂಪರೆ ಹಾಗೂ ವಿವಿಧ ಇತರ ವಿಷಯಗಳಲ್ಲಿ ಅರಿವಿನ ಮಟ್ಟವನ್ನು ಹೆಚ್ಚಿಸಲು ಹಾಗೂ ಕಲಿಕೆಯಲ್ಲಿ ಆಸಕ್ತಿಯನ್ನು ಮೂಡಿಸಲು ಈ ಕಾರ್ಯಕ್ರಮವು ಪೂರಕವಾಗಿದೆ.     

                 
ಈ ರಸಪ್ರಶ್ನೆಯ ಉದ್ದೇಶಗಳು ಹೀಗಿವೆ :

ವಿದ್ಯಾರ್ಥಿಗಳಲ್ಲಿ ಹೊಸ ವಿಷಯಗಳ ಬಗ್ಗೆ ತಿಳಿಯುವ ಕುತೂಹಲ ಹಾಗೂ ಸಾಮಾನ್ಯ ಜ್ಞಾನವನ್ನು ಬೆಳೆಸುವುದು.

ವಿದ್ಯಾರ್ಥಿಗಳಲ್ಲಿ ಚಿಂತಿಸುವ, ವಿಶ್ಲೇಷಿಸುವ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವುದು. ಭಾರತವು ವಿವಿಧ ಕ್ಷೇತ್ರದಲ್ಲಿ ಸಾಧಿಸಿರುವ ಸಾಧನೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದು.

ವಿದ್ಯಾರ್ಥಿಗಳನ್ನು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಪ್ರೇರೇಪಿಸಿ ಅವರಲ್ಲಿ ಸ್ಪರ್ಧಾ ಮನೋಭಾವನೆಯನ್ನು ಬೆಳೆಸುವುದು.

ಭಾರತದ ಶ್ರೀಮಂತ ಪರಂಪರೆಯನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿ, ಅವರಲ್ಲಿ ದೇಶದ ಬಗ್ಗೆ ಹೆಮ್ಮೆ ಹಾಗೂ ದೇಶಪ್ರೇಮ ಬೆಳೆಸುವುದು.

ರಾಷ್ಟ್ರೀಯ ಶಿಕ್ಷಣ ನೀತಿ 2020 ನ್ನು ಕಾರ್ಯಗತಗೊಳಿಸುವಲ್ಲಿ ಕರ್ನಾಟಕವು ಕಾರ್ಯ ಪುವೃತ್ತವಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಮುಖ ಸೂಚಕಗಳಲ್ಲಿ ಒಂದಾದ ಭಾರತ ಕೇಂದ್ರಿತ ಶಿಕ್ಷಣ ಹಾಗೂ ನಮ್ಮ ಶಾಲಾ ಮಕ್ಕಳಲ್ಲಿ ಭಾರತದ ದೇಶದ ಬಗ್ಗೆ ಹಮ್ಮ, ಸಂಸ್ಕೃತಿ ಪರಂಪರೆಯ ಕುರಿತು ಜಾಗೃತಿ ಮೂಡಿಸುವ ಪ್ರಾಮುಖ್ಯತೆಯನ್ನು ನಿರ್ಧಿಪ್ರವಾಗಿ “ಭಾರತದ ಜ್ಞಾನ” (Knowledge of INDIA ) ಎಂದು ಕರೆಯಲಾಗುತ್ತದೆ. ಭಾರತದ ಸ್ವಾತಂತ್ರದ 75 ವರ್ಷಗಳ ಸಂಭ್ರಮಾಚರಣೆಯ “ಆಜಾದಿ ಕಾ ಅಮೃತ್ ಮಹೋತ್ಸವ ” ಕಾರ್ಯಕ್ರಮದಡಿಯಲ್ಲಿ ಶಾಲೆ, ತಾಲೂಕು, ಜಿಲ್ಲೆ, ವಿಭಾಗ ಹಾಗೂ ರಾಜ್ಯ ಮಟ್ಟದಲ್ಲಿ ರಸಪ್ರಶ್ನೆ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಸ್ಪರ್ಧೆಯ ಹಂತಗಳು:

ಶಾಲೆ, ತಾಲ್ಲೂಕು, ಜಿಲ್ಲೆ ವಿಭಾಗ ಹಾಗೂ ರಾಜ್ಯ ಹಂತಗಳಲ್ಲಿ ಈ ಸ್ಪರ್ಧೆಯನ್ನು ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಓದುತ್ತಿರುವ 5 ರಿಂದ 10 ನೇ ತರಗತಿಗಳ ವಿದ್ಯಾರ್ಥಿಗಳಿಗೆ 2 ಹಂತಗಳಲ್ಲಿ ಆಯೋಜಿಸಲಾಗಿದೆ.

  1. ಕಿರಿಯರ ವಿಭಾಗ /ಜೂನಿಯರ್ ವಿಭಾಗ (5ರಿಂದ 7 ತರಗತಿಯ ವಿದ್ಯಾರ್ಥಿಗಳಿಗಾಗಿ)
  2. ಹಿರಿಯರ ವಿಭಾಗ /ಸೀನಿಯರ್ ವಿಭಾಗ (8ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗಾಗಿ)

 ಶಾಲಾ ಮಟ್ಟದ ವಿಜೇತ ಮಕ್ಕಳನ್ನು ನೊಂದಾಯಿಸಲು ಇಲ್ಲಿ ಕ್ಲಿಕ್ ಮಾಡಿ.

KSOU MYSORE

ಕರಾಮುವಿ: 2022-23ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿ ಪ್ರವೇಶಾತಿ ಪ್ರಾರಂಭ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ 2022-23ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಗೆ ಪ್ರಥಮ ವರ್ಷದ ಪ್ರವೇಶಾತಿ ಪ್ರಾರಂಭವಾಗಿದೆ. “ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಾತ್ರ ರಾಜ್ಯದಲ್ಲಿ ದೂರ ಶಿಕ್ಷಣ ನೀಡುವ ಏಕ ಮಾತ್ರ ವಿಶ್ವವಿದ್ಯಾನಿಲಯವಾಗಿರುತ್ತದೆ”. ಕೆಎಸ್‌ಒಯು ವಿಶ್ವವಿದ್ಯಾಲಯ ಧನಸಹಾಯ ಅಯೋಗದ (UGC) ಮಾನ್ಯತೆ ಪಡೆದಿದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆಶಯ ಎಲ್ಲಾರಿಗೂ ಎಲ್ಲೆಡೆ ಶಿಕ್ಷಣ ಎಂಬುದು, ಅದರ ಅನ್ವಯ ಕೆಲಸದ ಜೊತೆ ಶಿಕ್ಷಣ ಪಡೆಯಬೇಕೆಂಬ ಆಸೆಯಿರುವ ವ್ಯಕ್ತಿಗಳಿಗೆ ಅನುಕೂಲಕರವಾಗುವಂತೆ ಕೆಲಸದ ನಡುವೆ ಕಾಲೇಜಿಗೆ ಹಾಜರಾಗಲು ಸಾಧ್ಯವಾಗದಿರುವವರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಮೂಲಕ ಪದವಿಗಳನ್ನು ಪಡೆದುಕೊಳ್ಳಬಹುದು. ಯುಜಿಸಿ ನಿಯಮಾವಳಿ ಪ್ರಕಾರ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ನೀಡುವ ಪದವಿಗಳು ರೆಗ್ಯುಲರ್ ಮೂಲಕ ನೀಡುವ ಪದವಿಗಳು ಎರಡು ಒಂದೇ ಸಮನಾದ ಅರ್ಹತೆ ಇರುತ್ತದೆ. ಯುಜಿಸಿ ನಿಯಮಾವಳಿ ಪ್ರಕಾರ ಪೂರ್ಣಾವಧಿಯಲ್ಲಿ (ಭೌತಿಕ) (Regular) ಒಂದು ಕೋರ್ಸ್ ಮತ್ತು ದೂರ ಶಿಕ್ಷಣದಲ್ಲಿ (Open University) ಇನ್ನೂಂದು ಕೋರ್ಸ್ಅನ್ನು ಏಕಕಾಲದಲ್ಲೇ (ಒಂದೇ ವರ್ಷದಲ್ಲಿ) ಮಾಡಲು ಅವಕಾಶ ಇರುತ್ತದೆ. ವಿವಿಯು ವಿವಿಧ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಸಂಪೂರ್ಣ ವಿವರಗಳನ್ನು ಈ ಕೆಳಗಿನಂತೆ ತಿಳಿಸಲಾಗಿದೆ. ವಿವಿಧ ಶೈಕ್ಷಣಿಕ ಕೋರ್ಸ್‌ಗಳು – ಸ್ನಾತಕ ಪದವಿ – ಬಿ.ಎ,- ಬಿ.ಕಾಂ,- ಬಿ.ಬಿ.ಎ (Marketing Management),- ಬಿ.ಸಿ.ಎ,- ಬಿ.ಲಿಬ್.ಐ ಎಸ್ಸಿ., ಬಿ.ಎಸ್ಸಿ (General, Home Science, IT) ಸ್ನಾತಕೋತ್ತರ ಪದವಿ MA ವಿಷಯಗಳು – ಕನ್ನಡ, ಇಂಗ್ಲಿಷ್, ಹಿಂದಿ, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಶಿಕ್ಷಣ ಶಾಸ್ತ್ರ, ಪ್ರಾಚೀನ ಇತಿಹಾಸ ಮತ್ತು ಪುರಾತತ್ವ, (ಸೆಮಿಸ್ಟರ್ ಪರೀಕ್ಷೆ). ಸಂಸ್ಕೃತ., ಉರ್ದು, ಸಾರ್ವಜನಿಕ ಆಡಳಿತ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ. (ವಾರ್ಷಿಕ ಪರೀಕ್ಷೆ). ಎಂ.ಕಾಂ, (Dual Specialization – 1.Accounting and Finance/HRM., 2. Marketing Management and HRM/ Finance) ಎಂ.ಬಿ.ಎ ( AICTE Approved) (Specialization – •Finance • HRM • Marketing Management • Operations • Tourism • Corporate Law • Information Technology) -M.Sc ಕೋರ್ಸ್‌ಗಳು – ಜೀವ ರಸಾಯನಶಾಸ್ತ್ರ, ಜೈವಿಕ ತಂತ್ರಜ್ಞಾನ, ರಸಾಯನಶಾಸ್ತ್ರ, ಕ್ಲಿನಿಕಲ್ ನ್ಯೂಟ್ರಿಷನ್ ಅಂಡ್ ಡಯಟೆಟಿಕ್ಸ್, ಪರಿಸರ ವಿಜ್ಞಾನ, ಕಂಪ್ಯೂಟರ್ ವಿಜ್ಞಾನ, ಭೂಗೋಳ ಶಾಸ್ತ್ರ, ಮಾಹಿತಿ ವಿಜ್ಞಾನ, ಗಣಿತಶಾಸ್ತ್ರ, ಸೂಕ್ಷ್ಮ ಜೀವಶಾಸ್ತ್ರ, ಭೌತಶಾಸ್ತ್ರ, ಮನೋವಿಜ್ಞಾನ, ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ, ಫುಡ್ ಅಂಡ್ ನ್ಯೂಟ್ರಿಷನ್ ಸೈನ್ಸ್. ಎಂ.ಲಿಬ್‌.ಐ ಎಸ್ಸಿ ಪಿ.ಜಿ ಡಿಪ್ಲೊಮಾ (Graduate Based) ಕಮ್ಯೂನಿಕೇಟಿವ್ ಇಂಗ್ಲಿಷ್, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಇಂಗ್ಲಿಷ್, ಕುವೆಂಪು ಸಾಹಿತ್ಯ, ವ್ಯವಹಾರಿಕ ಕಾನೂನು, ವ್ಯವಹಾರಿಕ ನಿರ್ವಹಣೆ, ಮಾನವ ಸಂಪನ್ಮೂಲ ನಿರ್ವಹಣೆ, ಹಣಕಾಸು ನಿರ್ವಹಣೆ, ಅಂಬೇಡ್ಕರ್ ಅಧ್ಯಯನ, ಮಾರುಕಟ್ಟೆ ನಿರ್ವಹಣೆ, ಅಂಬೇಡ್ಕರ್ ಅಧ್ಯಯನ, ಮಾರುಕಟ್ಟೆ ನಿರ್ವಹಣಾಶಾಸ್ತ್ರ, ನ್ಯೂಟ್ರಿಷನ್ ಅಂಡ್ ಡಯಟೆಟಿಕ್ಸ್‌ , ಮಾಹಿತಿ ತಂತ್ರಜ್ಞಾನ, ಕಂಪ್ಯೂಟರ್ ಅಪ್ಲಿಕೇಶನ್. -ಡಿಪ್ಲೊಮಾ- (10+2 Based) ಡಿಪ್ಲೊಮಾ -ಕನ್ನಡ, ಪತ್ರಿಕೋದ್ಯಮ, ನ್ಯೂಟ್ರಿಷನ್ ಅಂಡ್ ಹೆಲ್ತ್ ಎಜುಕೇಷನ್, ಮಾಹಿತಿ ತಂತ್ರಜ್ಞಾನ, ಕಂಪ್ಯೂಟರ್ ಅಪ್ಲಿಕೇಷನ್. ಅರ್ಲಿ ಚೈಲ್ಡ್ ಕೇರ್ ಅಂಡ್ ಎಚುಕೇಷನ್. -ಸರ್ಟಿಫಿಕೇಟ್ – (10+2 Based) ಕನ್ನಡ, ಪಂಚಾಯತ್ ರಾಜ್, ಮಾಹಿತಿ ಸಂವಹನ ತಂತ್ರಜ್ಞಾನ, ನ್ಯೂಟ್ರಿಷನ್ ಅಂಡ್ ಫುಡ್. ಪ್ರವೇಶಾತಿಗೆ ಸಂಬಂಧಿಸಿದ ಮುಖ್ಯ ದಿನಾಂಕಗಳು ಬಿಎ / ಬಿ.ಕಾಂ / ಬಿ.ಬಿ.ಎ / ಬಿ.ಎಸ್ಸಿ/ ಬಿ.ಸಿ.ಎ/ ಎಂಎ/ಎಂ.ಕಾಂ/ಎಂ.ಎಸ್ಸಿ/ಬಿ.ಲಿಬ್.ಐ.ಎಸ್ಸಿ/ ಎಂ.ಲಿಬ್.ಐ.ಎಸ್ಸಿ / ಡಿಪ್ಲೊಮ / ಪಿಜಿ ಡಿಪ್ಲೊಮ / ಸರ್ಟಿಫಿಕೇಟ್ . B Ed – CET ಮುಖಾಂತರ ಮಾತ್ರ ಪ್ರವೇಶಾತಿ. ಈ ಮೇಲ್ಕಂಡ ಕೋರ್ಸ್ ‍ಗಳ ಪ್ರಥಮ ವರ್ಷದ ಪ್ರವೇಶಾತಿಗೆ ಪ್ರಾರಂಭ ದಿನಾಂಕ- 17/01/2023. ಕೊನೆಯ ದಿನಾಂಕ : 2022-23ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಯ ಪ್ರಥಮ ವರ್ಷದ ಪ್ರವೇಶಾತಿಗೆ 2023ರ ಮಾರ್ಚ್ 31 ಕೊನೆಯ ದಿನಾಂಕ. ಬೋಧನಾ ಶುಲ್ಕದಲ್ಲಿ ವಿಶೇಷ ರಿಯಾಯಿತಿ:- ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ 15% ಭೋಧನ ಶುಲ್ಕದಲ್ಲಿ ರಿಯಾಯಿತಿ. ಡಿಫೆನ್ಸ್ / ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ 15% ಭೋಧನ ಶುಲ್ಕದಲ್ಲಿ ರಿಯಾಯಿತಿ. ಅಟೋ/ಕ್ಯಾಬ್ ಚಾಲಕರು ಮತ್ತು ಅವರ ಮಕ್ಕಳಿಗೆ 30% ಭೋಧನ ಶುಲ್ಕದಲ್ಲಿ ರಿಯಾಯಿತಿ. KSRTC/BMTC/NWKSRTC/KKSRTC ನೌಕರರಿಗೆ 25% ಭೋಧನ ಶುಲ್ಕದಲ್ಲಿ ರಿಯಾಯಿತಿ. ಉಚಿತ ಪ್ರವೇಶಾತಿ:- ಕೋವಿಡ್ ನಿಂದ ಮರಣ ಹೊಂದಿದ ಪೋಷಕ ಮಕ್ಕಳಿಗೆ ಟ್ರಾನ್ಸ್ ಜೆಂಡರ್ / ತೃತೀಯ ಲಿಂಗಿಗಳಿಗೆ ದೃಷ್ಟಿ ಹೀನ ವಿದ್ಯಾರ್ಥಿಗಳಿಗೆ (ಬಿ.ಎಡ್/ಎಂಸಿಎ ಹೊರತು ಪಡಿಸಿ). ಸೂಚನೆ:- SC/ST/OBC ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ಒದಗಿಸಿದಲ್ಲಿ SSP ಮು‌ಖಾಂತರ ವಿದ್ಯಾರ್ಥಿ ವೇತನ ಪಡೆಯಬಹುದು. ಅರ್ಜಿ ಸಲ್ಲಿಕೆ ಹೇಗೆ? ಮೇಲೆ ತಿಳಿಸಿದ ಯಾವುದೇ ಕೋರ್ಸ್‌ಗಳ ಪ್ರವೇಶಾತಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ನಂತರ ಕಡ್ಡಾಯವಾಗಿ ನಿಮ್ಮ ಹತ್ತಿರದ ಪ್ರಾದೇಶಿಕ ಕೇಂದ್ರಕ್ಕೆ ಅಥವಾ KSOU ಕೇಂದ್ರ ಕಚೇರಿ ಮೈಸೂರಿಗೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿ ನಂತರ Debt Card/Cradit Card ಮೂಲಕ ಪ್ರವೇಶಾತಿ ಶುಲ್ಕ ಪಾವತಿಸಿ ಪ್ರವೇಶಾತಿ ಪಡೆದುಕೋಳ್ಳಬಹುದು.

 

ವಿವಾಹಿತ ಅಭ್ಯರ್ಥಿಗಳು ಮೂಲ ದಾಖಲೆಗಳ ಪರಿಶೀಲನಾ ಸಮಯದಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಲ್ಲಿಸುವಾಗ ಅವರ ಪತಿಯ ಹೆಸರಿನಲ್ಲಿ ಸಲ್ಲಿಸುವ ಬದಲು ಅವರ ತಂದೆ ಹೆಸರಿನಲ್ಲಿ ಪಡೆದ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಸಲ್ಲಿಸುತ್ತಿರುವ ಬಗ್ಗೆ ನ್ಯಾಯಾಲಯದ ಆಧೇಶ ಪತ್ರಿ.

 

ಕಲಿಕಾ ಹಬ್ಬದ ಆಹ್ವಾನ ಪತ್ರಿಕೆಯ ಮಾದರಿ

 

ಕಲಿಕಾ ಹಬ್ಬ ಕಾರ್ಯಕ್ರಮದ ನಮೂನೆಗಳು

 

ಕ್ಲಸ್ಟರ್ ಸಿ ಜಿ ನಮೂನೆಗಳು

 

ನಿಷ್ಠಾ 4.0 ಕೋರ್ಸುಗಳು.


ನಿಷ್ಠ 4.0 

ಒಳಗೊಳ್ಳುವ ಶಿಕ್ಷಣ ಕೋರ್ಸು ಸೇರಲು ಇಲ್ಲಿ ಕ್ಲಿಕ್ ಮಾಡಿ.


ENGLISH_NALI_KALI_LEVEL_1 LINK CLICK TO JOIN


ENGLISH_NALI_KALI_LEVEL_2 LINK CLICK TO JOIN



ಬಾನ್ ದನಿ ರೇಡಿಯೋ ಪಾಠ ಪ್ರಸಾರವನ್ನು ನೇರವಾಗಿ ಕೇಳಿಸಲು ಲಿಂಕ್.


 







ರೇಡಿಯೋ ಪಾಠ ಲೈವ್ ಆಗಿ ಕೇಳಿಸಲು ಇಲ್ಲಿ  ಕ್ಲಿಕ್ ಮಾಡಿ.

ಯೂ ಟೂಬ್ ಮೂಲಕ ರೇಡಿಯೋ ಪಾಠ ಆಲಿಸಲು ಇಲ್ಲಿ ಕ್ಲಿಕ್ ಮಾಡಿ.

FIT INDIA ಶಾಲಾ ಸಪ್ತಾಹ ಕಾರ್ಯಕ್ರಮದ ನೊಂದಣಿ ಮತ್ತು ಆದೇಶ.

FIT INDIA ಶಾಲಾ ಸಪ್ತಾಹ ಕಾರ್ಯಕ್ರಮದ ಹೆಚ್ಚಿನ ವಿವರ ಇಲ್ಲಿದೆ.

 ಫಿಟ್ ಇಂಡಿಯಾ ಕಾರ್ಯಕ್ರಮವು ರಾಷ್ಟ್ರವ್ಯಾಪಿ ಆಂದೋಲನವಾಗಿದ್ದು, ವಿದ್ಯಾರ್ಥಿಗಳು ದೈಹಿಕ ಚಟುವಟಿಕೆಗಳಲ್ಲಿ ಮತ್ತು ಕ್ರೀಡೆಗಳಲ್ಲಿ ಭಾಗವಹಿಸುವುದರ ಮೂಲಕ ಆರೋಗ್ಯಕರ ಮತ್ತು ಸದೃಢವಾಗಿರುವಂತೆ ಪ್ರೋತ್ಸಾಹಿಸುವ ಉದ್ದೇಶ ಹೊಂದಿದೆ. ಸದರಿ ಕಾರ್ಯಕ್ರಮದಲ್ಲಿ ರಾಜ್ಯದ ಶಾಲೆಗಳ ಎಲ್ಲಾ ವಿದ್ಯಾರ್ಥಿಗಳನ್ನು ಕ್ರೀಡೆ ಮತ್ತು ದೈಹಿಕ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಮಾಡಿ, ಅವರನ್ನು ದೈಹಿಕ ಮತ್ತು ಮಾನಸಿಕವಾಗಿ ಸದೃಢಗೊಳಿಸುವುದಾಗಿದೆ.

        ಈ ಕಾರ್ಯಕ್ರಮವು ಕೇಂದ್ರ ಸರ್ಕಾರದ ಯುವಜನ ಮತ್ತು ಕ್ರೀಡಾ ಮಂತ್ರಾಲಯದಡಿಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ದಿನಾಂಕ:15.01.2023ರವರೆಗೆ
ಹಮ್ಮಿಕೊಳ್ಳಬೇಕಾಗಿದೆ.

ಈ ಕುರಿತಂತೆ ಕೆಳಗಿನ ಮಾರ್ಗಸೂಚಿಗಳ ಪ್ರಕಾರ ಕ್ರಮ ಕೈಗೊಳ್ಳುವುದು

  • ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳು https://fitindia.gov.in/fit-
    india-school-week ಯಲ್ಲಿ ಮೊದಲು ನೋಂದಾಯಿಸಿ ನಂತರ 15.01.2023ರೊಳಗೆ ಫಿಟ್ ಇಂಡಿಯಾ
    ಶಾಲಾ ಸಪ್ತಾಹವನ್ನು 06 ದಿನಗಳು ಕಡ್ಡಾಯವಾಗಿ ಹಮ್ಮಿಕೊಳ್ಳುವುದು, ಈ ಜ್ಞಾಪನದೊಂದಿಗೆ
    ನೋಂದಣಿಯ ಪ್ರಕ್ರಿಯೆ ಬಗ್ಗೆ ಎಂ.ಒ.ಇ ನ ಜ್ಞಾಪನ ಲಗತ್ತಿಸಿದೆ.
  • ನೋಂದಾಯಿಸಿದ ಶಾಲೆಗಳು ಕಾರ್ಯಕ್ರಮವನ್ನು ಆಯೋಜಿಸಿ ಅದರ ಫೋಟೋ ಮತ್ತು ವಿಡಿಯೊ ಗಳನ್ನು
    ಮೇಲೆ ನೀಡಿರುವ ವೆಬ್ ಸೈಟ್‌ನಲ್ಲಿ ಕಡ್ಡಾಯವಾಗಿ ಅಪ್‌ಲೋಡ್ ಮಾಡುವುದು, ಅಪ್‌ಲೋಡ್ ಮಾಡಿದ
    ನಂತರ ಡಿಜಿಟಲ್ ಪ್ರಶಸ್ತಿ ಪತ್ರವನ್ನು ಡೌನೋಡ್ ಮಾಡಿಕೊಂಡು, ವಿವರವನ್ನು ರಾಜ್ಯ ಕಚೇರಿಗೆ
    ನೀಡುವುದು.
  • ಕಾರ್ಯಕ್ರಮದ ಸಮರ್ಪಕ ಅನುಷ್ಠಾನಕ್ಕಾಗಿ ಜಿಲ್ಲಾ ಉಪನಿರ್ದೇಶಕರು (ಆಡಳಿತ) ರವರು ಜಿಲ್ಲಾ ದೈಹಿಕ
    ಶಿಕ್ಷಣಾಧಿಕಾರಿಗಳನ್ನು ಜಿಲ್ಲಾ ನೋಡಲ್ ಅಧಿಕಾರಿಯಾಗಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಾಲ್ಲೂಕು ದೈಹಿಕ
    ಶಿಕ್ಷಣಾಧಿಕಾರಿಗಳನ್ನು ತಾಲ್ಲೂಕು ನೋಡಲ್ ಅಧಿಕಾರಿಯಾಗಿ ನೇಮಿಸುವುದು.
  • ಉಪನಿರ್ದೇಶಕರು (ಆಡಳಿತ) ರವರು ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಗಳೊಂದಿಗೆ ಕಾರ್ಯಕ್ರಮದ ವಿವರ
    ಮತ್ತು ಅನುಷ್ಠಾನ ಕುರಿತಂತೆ ತಮ್ಮ ವ್ಯಾಪ್ತಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ತಾಲ್ಲೂಕು ದೈಹಿಕ
    ಶಿಕ್ಷಣಾಧಿಕಾರಿಗಳ ಸಭೆ ಆಯೋಜಿಸಿ, ಮಾಹಿತಿ ಪಡೆದು ರಾಜ್ಯ ಕಚೇರಿಗೆ ನೀಡುವುದು.
  • ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ
    ಶಾಲೆಗಳ ಮುಖ್ಯ ಶಿಕ್ಷಕರ ಸಭೆ ಕರೆದು ಕಾರ್ಯಕ್ರಮ ಅನುಷ್ಠಾನ ಕುರಿತು ಕ್ರಮ ಕೈಗೊಳ್ಳುವಂತೆ
    ಸೂಚಿಸುವುದು.
  • ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಮುಖ್ಯ ಶಿಕ್ಷಕರು ಕೆಳಕಂಡ ಪಟ್ಟಿಯಲ್ಲಿರುವಂತೆ
    ದಿನದ ಚಟುವಟಿಕೆಗಳನ್ನು ಕಡ್ಡಾಯವಾಗಿ ಆಯೋಜಿಸುವುದು. ಈ ಕುರಿತು ಸಾಕಷ್ಟು ಮುಂಚಿತವಾಗಿಯೇ ಶಾಲಾ ಹಂತದ ಯೋಜನೆ ಸಿದ್ಧಪಡಿಸಿಕೊಳ್ಳುವಂತೆ ಸೂಚಿಸುವುದು.
ದಿನಚಟುವಟಿಕೆಯ ವಿವರ
1.
ಆರಂಭಿಕ ದಿನ – ವಾರ್ಷಿಕ   ಕ್ರೀಡಾಕೂಟ
2.
ಫಿಟೈಸ್ ಪ್ರಾಮುಖ್ಯತೆ – ಚರ್ಚಾಸ್ಪಧೆ, ರಸಪ್ರಶ್ನೆ, ಪ್ರಬಂಧ ಸ್ಪರ್ಧೆ, ಪೋಸ್ಟರ್ ತಯಾರಿಕಾ ಸ್ಪರ್ಧೆ ಚಟುವಟಿಕೆಗಳನ್ನು ಆಯೋಜಿಸುವುದು.
3.ಸಾಂಪ್ರದಾಯಿಕ ಆಟಗಳನ್ನು ಆಯೋಜಿಸುವುದು.
4.ವಿದ್ಯಾರ್ಥಿಗಳ ಕೇಲೋ ಇಂಡಿಯಾ ಫಿಟೈಸ್ ಮೌಲ್ಯಮಾಪನ ಮಾಡುವುದು.
5.ಫಿಟ್ ಇಂಡಿಯಾ ಮೊಬೈಲ್ ಅಪ್ಲಿಕೇಶನ್ ಮೂಲಕ ಸಮುದಾಯದ ಫಿಟ್ಟಿಸ್
ಮೌಲ್ಯಮಾಪನ ಮಾಡುವುದು.

6.ಯೋಗಾ ಮತ್ತು ಧ್ಯಾನ

ಫಿಟ್ ಇಂಡಿಯಾ ಶಾಲಾ ಸಪ್ತಾಹ ಕಾರ್ಯಕ್ರಮದಲ್ಲಿ ಕೈಗೊಳ್ಳಲಾಗುವ ವಿವಿಧ ಚಟುವಟಿಕೆಗಳ ಕುರಿತು
ವಿದ್ಯಾರ್ಥಿಗಳಿಗೆ ಮುಂಚಿತವಾಗಿಯೇ ಮಾಹಿತಿ ನೀಡಲು ಕ್ರಮವಹಿಸುವುದು.

FIT INDIA ನೊಂದಣಿಗಾಗಿ ಇಲ್ಲಿ CLICK HERE

FIT INDIA ಶಾಲಾ ಸಪ್ತಾಹ ಕಾರ್ಯಕ್ರಮದ ಆದೇಶಕ್ಕಾಗಿ ಕ್ಲಿಕ್ ಮಾಡಿ.

7 th Pay Calculator.